ಚುನಾವಣೆಗೆ ಸ್ಪರ್ಧಿಸುವಂತೆ ತುಂಬಾ ಹಿಂಸೆ ಕೊಡ್ತಿದ್ದಾರೆ ಎಂದು ಹೇಳುವ ಮೂಲಕ ರಾಜಕೀಯ ನಿವೃತ್ತಿ ವಾಪಸ್ ಕುರಿತು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅಚ್ಚರಿ ಹೇಳಿಕೆ ನೀಡಿದ್ದಾರೆ

Waves of Karnataka

ಚುನಾವಣೆಗೆ ಸ್ಪರ್ಧಿಸುವಂತೆ ತುಂಬಾ ಹಿಂಸೆ ಕೊಡ್ತಿದ್ದಾರೆ ಎಂದು ಹೇಳುವ ಮೂಲಕ ರಾಜಕೀಯ ನಿವೃತ್ತಿ ವಾಪಸ್ ಕುರಿತು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಿಂದ (Bengaluru North Lok Sabha Constituency) ಸ್ಪರ್ಧೆಗೆ ಒತ್ತಾಯ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಡಿವಿ ಸದಾನಂದ ಗೌಡ (DV Sadananda Gowda) ಅವರು, ನನಗೆ ಚುನಾವಣೆಗೆ (Election) ಸ್ಪರ್ಧಿಸುವಂತೆ ತುಂಬಾ ಹಿಂಸೆ ಕೊಡುತ್ತಿದ್ದಾರೆ. ಆದರೆ ಸ್ಪರ್ಧೆ ಮಾಡುವ ಬಗ್ಗೆ ಮುಂದೆ ನೋಡೋಣ ಏನಾಗುತ್ತೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.