ಸಿದ್ದರಾಮಯ್ಯ ಟಿಪ್ಪುನಂತೆ ಹಿಂದು ಮುಸ್ಲಿಮರನ್ನು ಬೇರೆ ಮಾಡುತ್ತಿದ್ದಾರೆ

Waves of Karnataka


 ಅಲ್ಪಸಂಖ್ಯಾತರ ಬಡಾವಣೆಗಳ ಸುಧಾರಣೆಗೆ 11 ಸಾವಿರ ಕೋಟಿ ರೂಪಾಯಿ ನೀಡುವುದಾಗಿ ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಟಿಪ್ಪು ಸುಲ್ತಾನ ಮಾಡಿದಂತೆಯೇ ಹಿಂದೂ-ಮುಸ್ಲಿಮರನ್ನು ಬೇರೆ ಮಾಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ.

ಅವರು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಒಂದೇ ವಾರದಲ್ಲಿ ಪ್ರತಿ ರೈತರಿಗೆ 2 ಸಾವಿರ ರೂ. ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ವಾಸ್ತವವಾಗಿ ಪ್ರತಿಯೊಬ್ಬರಿಗೆ 30-40 ಸಾವಿರ ರೂ.‌ ಕೊಡಬೇಕಿತ್ತು. ಇವರಿಗೆ ಅಷ್ಟು ಹಣ ನೀಡಲು ಕೂಡ ಯೋಗ್ಯತೆ ಇಲ್ಲ. ಬೆಳಗಾವಿ ಅಧಿವೇಶನದಲ್ಲಿ ವಿರೋಧ ಬರುತ್ತದೆಂದು 2 ಸಾವಿರ ರೂ. ಘೋಷಿಸಿದ್ದರು. ಅದನ್ನು ಕೊಡುವ ಯೋಗ್ಯತೆ ಇಲ್ಲದವರು ಮಾನ ಮರ್ಯಾದೆ ಇಲ್ಲದೆ 11 ಸಾವಿರ ಕೋಟಿ ರೂಪಾಯಿಯನ್ನು ಅಲ್ಪಸಂಖ್ಯಾತರ ಬಡಾವಣೆಗೆ ಖರ್ಚು ಮಾಡುತ್ತೇನೆ ಎಂದು ಹೇಳುತ್ತಾರೆ ಎಂದು ದೂರಿದರು.