ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಶ್ರೀರಾಮನ ಪ್ರತಿಮೆ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ

Waves of Karnataka


 ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್  ಕೆತ್ತನೆಯ ಶ್ರೀರಾಮನ ಪ್ರತಿಮೆ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ. ಜನವರಿ 22 ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರವನ್ನು ಉದ್ಘಾಟಿಸಲಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಮೆ ಜೊತೆಗೆ ಶಿಲ್ಪಿ ಯೋಗಿರಾಜ್ ಅರುಣ್ ಅವರ ಫೋಟೋವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ, ವಿಜಯೇಂದ್ರ, ಸಂಸದ ಪ್ರತಾಪ್ ಸಿಂಹ ಮತ್ತಿತರರು ಹಂಚಿಕೊಂಡಿದ್ದಾರೆ.

“ಶ್ರೀರಾಮ-ಹನುಮರ ಬಾಂಧವ್ಯಕ್ಕೆ ಕರುನಾಡ ನಂಟಿದೆ, ಇದೀಗ ರಾಮನೂರಿನ ಗುಡಿಯನು ಮೈಸೂರಿನ ಬಾಲರಾಮನು ಬೆಳಗುವನು. ಮೈಸೂರಿನ ಅಪ್ರತಿಮ ಶಿಲ್ಪ ಕಲಾ ಪ್ರತಿಭೆ ಅರುಣ್ ಯೋಗಿರಾಜ್ ಅವರ ಭಕ್ತಿ ಕೌಶಲ್ಯದ ಕೆತ್ತನೆಯಿಂದ ಪಡಿಮೂಡಿದ ರಾಮಲಲಾ ಮೂರ್ತಿಯು ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರುತ್ತಿರುವುದು ಮೈಸೂರಿನ ಹಿರಿಮೆ, ಕರುನಾಡ ಹೆಮ್ಮೆಯಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.