ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯ ನಾಯಕರು ಆಕ್ರೋಶ ವ್ಯಕ್ತಪಡಿಸಿ "ನನ್ನನ್ನೂ ಬಂಧಿಸಿ" ಅಭಿಯಾನ ನಡೆಸುತ್ತಿರುವುದನ್ನು ಕಾಂಗ್ರೆಸ್ ಟೀಕಿಸಿದೆ.

Waves of Karnataka


 ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯ ನಾಯಕರು ಆಕ್ರೋಶ ವ್ಯಕ್ತಪಡಿಸಿ "ನನ್ನನ್ನೂ ಬಂಧಿಸಿ" ಅಭಿಯಾನ ನಡೆಸುತ್ತಿರುವುದನ್ನು ಕಾಂಗ್ರೆಸ್ ಟೀಕಿಸಿದೆ.

ಚಿಕ್ಕಮಗಳೂರಿನ ಪೊಲೀಸ್ ಠಾಣೆ ಎದುರು ಬಿಜೆಪಿ ನಾಯಕ ಸಿಟಿ ರವಿ ನನ್ನನ್ನೂ ಬಂಧಿಸಿ ಎಂಬ ಪೋಸ್ಟರ್ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಮಲ್ಲೇಶ್ವರದಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಶಾಸಕ, ಮಾಜಿ ಸಚಿವ ಸುನಿಲ್ ಕುಮಾರ್, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸುರೇಶ್ ಕುಮಾರ್ ಸೇರಿದಂತೆ ಅನೇಕ ನಾಯಕರು ನಾನೂ ಕರಸೇವಕ-1992, ನನ್ನನ್ನೂ ಬಂಧಿಸಿ" ಎಂಬ ಅಭಿಯಾನದ ಮೂಲಕ ಕಾಂಗ್ರೆಸ್ ಸರ್ಕಾರದ ನಡೆಯನ್ನು ಪ್ರತಿಭಟಿಸಿದ್ದಾರೆ.