ಐಟಿ ಇಲಾಖೆ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಜಾ; 520 ಕೋಟಿ ರೂ. ದೇಣಿಗೆ ಮುಚ್ಚಿಟ್ಟಿತಾ ಕಾಂಗ್ರೆಸ್?

Waves of Karnataka


 ಕಾಂಗ್ರೆಸ್ ಖಾತೆಗಳನ್ನು ಕೇಂದ್ರ ಸರ್ಕಾರ ನಿಷ್ಕ್ರಿಯಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 2014ರಿಂದ 2017ರವರೆಗೆ ಕಾಂಗ್ರೆಸ್ ಸಲ್ಲಿಸಿರುವ ಆದಾಯ ತೆರಿಗೆಯನ್ನು ಮರುಪರಿಶೀಲಿಸಲು ಆದಾಯ ತೆರಿಗೆ ಇಲಾಖೆ ಮುಂದಾಗಿದೆ. ಆದರೆ, ಇದನ್ನು ಪ್ರಶ್ನಿಸಿ ಕಾಂಗ್ರೆಸ್, ದೆಹಲಿ ಹೈಕೋರ್ಟ್ ಮೊರೆ ಹೋಗಿತ್ತು. ಆದರೆ, ಕಾಂಗ್ರೆಸ್ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಳ್ಳಿಹಾಕಿದೆ. ಅತ್ತ, ಆದಾಯ ತೆರಿಗೆ ಸಲ್ಲಿಕೆ ವೇಳೆ 520 ಕೋಟಿ ರೂ. ಮೊತ್ತದ ದೇಣಿಗೆಯನ್ನು ಕಾಂಗ್ರೆಸ್ ಮುಚ್ಚಿಟ್ಟಿದೆ ಎಂದು ಐಟಿ ಇಲಾಖೆ ಆರೋಪಿಸಿದೆ.