ಯದುವೀರ್ ಗೆ ಟಿಕೆಟ್ ಕೊಟ್ರೆ ಸ್ವಾಗತ; ಕರಪತ್ರ ಹಂಚಿ ಗೆಲ್ಲಿಸಿಕೊಂಡು ಬರುವೆ: ಪ್ರತಾಪ್ ಸಿಂಹ ಹೇಳಿಕೆ

Waves of Karnataka


 ನಗರದಲ್ಲಿ ಮಂಗಳವಾರ ಬೆಳಗ್ಗೆ ಸುದ್ದಿಗಾರರ ಪ್ರಶ್ವೆಗಳಿಗೆ ಉತ್ತರಿಸಿದ ಅವರು, ನನಗೆ ಟಿಕೆಟ್ ಕೈತಪ್ಪಲು ಕಾರಣ ಕೊಡಿ. ನಾನು ಯಾವುದರಲ್ಲಿ ಕಡಿಮೆ ಇದ್ದೇನೆ ಹೇಳಿ ಎಂದು ಪ್ರಶ್ನಿಸಿದರು. ಬಿಜೆಪಿ ಹೈಕಮಾಂಡ್ ನನಗೇ ಟಿಕೆಟ್ ನೀಡುತ್ತದೆ ಎಂಬ ನಂಬಿಕೆ ಇದೆ. ಒಂದು ವೇಳೆ ಮಾಧ್ಯಮಗಳಲ್ಲಿ ಪ್ರಚಾರವಾಗುತ್ತಿರುವಂತೆ ನನ್ನ ಬದಲು ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡುವುದು ನಿಜವಾದಲ್ಲಿ ಅವರ ಪರವಾಗಿ ಕೆಲಸ ಮಾಡುವೆ ಎಂದು ತಿಳಿಸಿದರು.