ಜೆಡಿಎಸ್ ಅಸ್ತಿತ್ವ ಇದ್ಯಾ ಅಂತ ಮೊದ್ಲು ಹೇಳಲಿ, ಮತ್ತೆ ಪ್ರಬಲ ಅಭ್ಯರ್ಥಿ ಪ್ರಶ್ನೆ: ಎಚ್ ಡಿಕೆಗೆ ಡಿಕೆಶಿ ಟಾಂಗ್

Waves of Karnataka


 ಜೆಡಿಎಸ್ ಮತ್ತು ಎಚ್ ಡಿ ಕುಮಾರಸ್ವಾಮಿ ವಿರುದ್ಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ಇದ್ಯಾ ಎಂದು ವ್ಯಂಗ್ಯವಾಡಿದ್ದಾರೆ. ಅವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಮನನೊಂದಿರುವ ದೊಡ್ಡ ಸಂಖ್ಯೆಯ ಕಾರ್ಯಕರ್ತರು ಕಾಂಗ್ರೆಸ್ ಸೇರಲು ರೆಡಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಟಿಕೆಟ್ ಹಂಚಿಕೆಗೆ ಸಂಬಂಧಿಸಿ ಸ್ಥಳೀಯವಾಗಿ ಮುಖಂಡರ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ಗೆ ವರದಿ ಕೊಡುವುದಷ್ಟೇ ನಮ್ಮ ಕರ್ತವ್ಯ. ಅದನ್ನು ಸರಿಯಾಗಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.