"ಶಿವಗಂಗಾ ಬಸವರಾಜ ಪ್ರಶ್ನೆ: ಮುಖ್ಯಮಂತ್ರಿ ಪುತ್ರನಾದರೆ ಮನಸೋ ಇಚ್ಛೆ ಮಾತನಾಡಬಹುದೇ?"

Waves of Karnataka


ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಪರಮಾಪ್ತ, ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬದಲಾವಣೆ ವಿಚಾರದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಉತ್ತರಾಧಿಕಾರಿ ಯಾರು ಎಂಬುದು ಹೈ ಕಮಾಂಡ್ ತೀರ್ಮಾನಿಸಲಿದೆ ಎಂದಿದ್ದಾರೆ. ಯತೀಂದ್ರ ಈ ತರ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಬಾರದು. ಈ ರೀತಿಯ ಬಾಲಿಶ ಹೇಳಿಕೆ ನೀಡಿದರೆ ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ ಅಂತ ಯತೀಂದ್ರ ವಿರುದ್ಧ ಶಿವಗಂಗಾ ಬಸವರಾಜು ಆಕ್ರೋಶ ವ್ಯಕ್ತಪಡಿಸಿದ್ದಾರ

2028ಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ಈ ನಿಟ್ಟಿನಲ್ಲಿ ಗಮನ ಹರಿಸಬೇಕು. ಇಂತವರ ಬಗ್ಗೆ ಹೈ ಕಮಾಂಡ್ ಗಮನ ಹರಿಸಬೇಕು. ಒಂದು ವೇಳೆ ಈ ರೀತಿಯಾಗಿ ನಾನು ಹೇಳಿಕೆ ಕೊಟ್ರೆ ನೋಟಿಸ್ ಕೊಡ್ತಾರೆ. ಆದ್ರೆ ಮುಖ್ಯಮಂತ್ರಿಗಳ ಮಕ್ಕಳಾದ್ರೆ ಸುಮ್ಮನೆ ಇರೋದು ಸರಿಯಲ್ಲ.