ಸಂತೋಷ್ ಲಾಡ್ ಪದ ಬಳಕೆ ವಿವಾದ: 'ಕೀಳು ಮಟ್ಟದ ವ್ಯಕ್ತಿತ್ವ ಪ್ರದರ್ಶನ' ಎಂದು ಬಿ.ವೈ.ವಿಜಯೇಂದ್ರ ಕಿಡಿ

Waves of Karnataka


 ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ವಿಜಯೇಂದ್ರ ಅವರು, ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ….’ ಎಂಬಂತೆ ಸಂತೋಷ್ ಲಾಡ್ ಅವರ ಎಲುಬಿಲ್ಲದ ನಾಲಿಗೆಯಲ್ಲಿ ಹೊಲಸು ಮಾತುಗಳು ಹೊಮ್ಮತ್ತಿದೆ ಎಂದಿದ್ದಾರೆ.

ಹೆಮ್ಮೆಯ ಕರ್ನಾಟಕ ಸರ್ಕಾರದ ಜವಾಬ್ದಾರಿಯುತ ಮಂತ್ರಿ ಸ್ಥಾನದಲ್ಲಿ ಕುಳಿತು ಅದರ ಘನತೆಗೆ ಕೊಚ್ಚೆ ಬಳಿಯುವ ಮಾತುಗಳನ್ನಾಡುತ್ತಿರುವ ಸಂತೋಷ್ ಲಾಡ್ ರಂಥವರು @INCKarnataka ಸರ್ಕಾರದ ಸಚಿವರು ಎಂದು ಹೇಳಿಕೊಳ್ಳಲು ಮಾತ್ರ ಲಾಯಕ್ಕಾಗಿದ್ದಾರೆಯೇ ಹೊರತು, ಕರ್ನಾಟಕ ಸರ್ಕಾರದ ಸಚಿವರು ಎಂದು ಹೇಳಿಕೊಳ್ಳುವ ಯಾವ ಯೋಗ್ಯತೆಯೂ ಇಲ್ಲ ಎನ್ನುವುದನ್ನು ಅವರ ಈ ಹಿಂದಿನ ಮಾತುಗಳು ಹಾಗೂ ನಡವಳಿಕೆಗಳು ಸಾಕ್ಷೀಕರಿಸಿದ್ದವು ಎಂದು ಲೇವಡಿ ಮಾಡಿದ್ದಾರೆ.