"ಸಿದ್ದರಾಮಯ್ಯನಾ? ಡಿಕೆಶಿನಾ? ರಾಜ್ಯದಲ್ಲಿ ಮುಖ್ಯಮಂತ್ರಿ ಯಾರು?" - ಹೆಚ್‌ಡಿಕೆ ಪ್ರಶ್ನೆ!

Waves of Karnataka

 


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ರಸ್ತೆ ಗುಂಡಿಗಳ ಬಗ್ಗೆ ಕೇಳಿದ್ದಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಕೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದು ಬೇಜವಾಬ್ದಾರಿಯ ಪರಮಾವಧಿ ಎಂದು ಕಿಡಿಕಾರಿದರು.

ಸಿಎಂ ಹೇಳಿಕೆ ನೋಡಿದರೆ ಅವರು ಈ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲು ಅಸಮರ್ಥನಾಗಿದ್ದೇನೆಂದು ಹೇಳಿದ ರೀತಿ ಇದೆ. ರಾಜ್ಯದ ಸಿಎಂ ಸಿದ್ದರಾಮಯ್ಯ ಅವರಾ ಅಥವಾ ಡಿಕೆ.ಶಿವಕುಮಾರ್ ಅವರಾ ಎನ್ನುವ ಪ್ರಶ್ನೆ ಮೂಡುತ್ತಿದೆ. ಸಿಎಂ ಸಭೆ ಮಾಡಿ ರಸ್ತೆ ಗುಂಡಿ ಮುಚ್ಚಲು ಡೆಡ್ ಲೈನ್ ಕೊಟ್ಟಿದ್ದರು. ಆದರೆ, ರಸ್ತೆಗಳಲ್ಲಿ ಗುಂಡಿಗಳು ಹಾಗೆಯೇ ಇವೆ. ಅಧಿಕಾರಿಗಳು ಇವರ ಮಾತಿಗೆ ಎಷ್ಟು ಬೆಲೆ ಕೊಡುತ್ತಿದ್ದಾರೆಂಬುದು ಇದರಿಂದ ಗೊತ್ತಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಜಾತಿ ಗಣತಿ ಕುರಿತು ಮಾತನಾಡಿ, ಸಿದ್ದರಾಮಯ್ಯ ಅವರು ರಾಜ್ಯದ ಜನರ ಕಲ್ಯಾಣಕ್ಕಾಗಿ ಅಲ್ಲದೆ, ತಮ್ಮ ಗುಪ್ತ ಕಾರ್ಯಸೂಚಿಗಾಗಿ ಮಾಡಿದ ಸಮೀಕ್ಷೆಯಾಗಿದೆ ಎಂದು ಕಿಡಿಕಾರಿದರು.