ರೈತರ ಗೋಳು ಕೇಳೋರಿಲ್ಲ, ಅಧಿಕಾರಕ್ಕಾಗಿ ಜಗಳ": ಕಾಂಗ್ರೆಸ್‌ಗೆ ಬಿ.ವೈ.ವಿಜಯೇಂದ್ರ ತೀವ್ರ ತರಾಟೆ (

Waves of Karnataka


 ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಟನ್ ಕಬ್ಬಿಗೆ 3,500 ರೂ. ನೀಡುವಂತೆ ಗುರ್ಲಾಪುರ ಬಳಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವೇ ಮುಂದಾಳತ್ವ ವಹಿಸಿ ಅವರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಬೇಕಿತ್ತು. ಆದರೆ, ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಅವರ ಹೋರಾಟಕ್ಕೆ ಬೆಂಬಲ ಸೂಚಿಸಲು ಇಲ್ಲಿಗೆ ಬಂದಿದ್ದೇವೆಂದು ಹೇಳಿದರು.

ರಾಜ್ಯದಲ್ಲಿ 2014ರಲ್ಲಿ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆದ ವೇಳೆ ಕಬ್ಬಿನ ವಿಚಾರವಾಗಿಯೇ ರೈತ ವಿಠ್ಠಲ ಅರಭಾವಿ ಪ್ರಾಣ ಕಳೆದುಕೊಂಡರು. ಆಗ ಬಿ.ಎಸ್.ಯಡಿಯೂರಪ್ಪ ಹೋರಾಟ ಮಾಡಿ ಅಂದಿನ ಮುಖ್ಯಮಂತ್ರಿ ಮೇಲೆ ಒತ್ತಡ ತಂದು, ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಇಂದು ರೈತರು ಸಂಕಷ್ಟ ಎದುರಿಸುತ್ತಿದ್ದರೂ ಸರ್ಕಾರ ಕಿಂಚಿತ್ತು ಕಾಳಜಿ ತೋರುತ್ತಿಲ್ಲ ಎಂದು ಕಿಡಿಕಾರಿದರು