ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರಿನ ಗ್ರಾಮೀಣ ಪ್ರದೇಶದ ಬಿದರಕಟ್ಟೆಯಲ್ಲಿ ವಿಶ್ವವಿದ್ಯಾಲಯ ಕ್ಯಾಂಪಸ್ ಉದ್ಘಾಟಿಸಲಿದ್ದು, ನಂತರ ತುಮಕೂರಿನಲ್ಲಿ ಕ್ಯಾನ್ಸರ್ ಚಿಕಿತ್ಸಾಲಯವನ್ನು ಉದ್ಘಾಟಿಸಲಿದ್ದಾರೆ.
ಇದರ ಬೆನ್ನಲ್ಲೇ ರಾಜಣ್ಣ ಅವರ ಮನೆಯಲ್ಲಿ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ಗೃಹ ಸಚಿವ ಪರಮೇಶ್ವರ್ ಅವರೂ ಕೂಡ ಮುಖ್ಯಮಂತ್ರಿಗಳಿಗೆ ಸಾಥ್ ನೀಡಲಿದ್ದಾರೆಂದು ತಿಳಿದುಬಂದಿದೆ.
ಔತಣಕೂಟದಲ್ಲಿ ಸಿದ್ದರಾಮಯ್ಯ ಅವರು, ರಾಜಣ್ಣ ಅವರನ್ನು ಸಂಪುಟಕ್ಕೆ ಮರಳಿ ಸೇರ್ಪಡೆಗೊಳಿಸುವ ಕುರಿತು ಮಾತುಕತೆ ನಡೆಸಬಹುದು ಎಂದು ಮೂಲಗಳು ತಿಳಿಸಿವೆ.
