ಸಿಧು ಪತ್ನಿ ಹೇಳಿಕೆಗೆ ಡಿಕೆಶಿ ಗರಂ: '500 ಕೋಟಿ ಕೊಟ್ಟರೆ ಸಿಎಂ ಹುದ್ದೆ' ಎನ್ನಲು ನವಜೋತ್ ಕೌರ್ ಮೆಂಟಲ್ ಆಸ್ಪತ್ರೆಗೆ ಸೇರಲಿ!

Waves of Karnataka


 ಮುಖ್ಯಮಂತ್ರಿ ಹುದ್ದೆಗೆ 500 ಕೋಟಿ ರೂ. ನೀಡಬೇಕು' ಎಂಬ ಹೇಳಿಕೆಗಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಮಾನಸಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಿಕೊಳ್ಳುವಂತೆ ಕಾಂಗ್ರೆಸ್ ನಾಯಕಿ ನವಜೋತ್ ಕೌರ್ ಸಿಧು ಅವರಿಗೆ ಸಲಹೆ ನೀಡಿದ್ದಾರೆ.

ಪಂಜಾಬ್‌ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಅವರು ಶನಿವಾರ, '500 ಕೋಟಿ ರೂ. ಸೂಟ್‌ಕೇಸ್ ನೀಡುವವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ' ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು. ಕಾಂಗ್ರೆಸ್ ಕಾರ್ಯವೈಖರಿಯ ಬಗ್ಗೆ ಬಿಜೆಪಿ ಮತ್ತು ಎಎಪಿಯಿಂದ ತೀವ್ರ ಟೀಕೆ ವ್ಯಕ್ತವಾಗಿದೆ.

ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಿವಕುಮಾರ್, 'ಅವರು ಆಸ್ಪತ್ರೆಗೆ ದಾಖಲಾಗಲಿ, ಯಾವುದಾದರೂ ಒಳ್ಳೆಯ ಮಾನಸಿಕ ಆಸ್ಪತ್ರೆಗೆ ಸೇರಿಕೊಳ್ಳಲಿ' ಎಂದು ಹೇಳಿದರು