ಬೇಡಿಕೆ ಈಡೇರಿದೆ, ಹೈಕಮಾಂಡ್ ಸಾಥ್ ಅವರಿಗಿದೆ": ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಡಿಕೆಶಿ.

Waves of Karnataka


 ನನ್ನ, ಸಿಎಂ ನಡುವೆ ಒಂದು ಒಪ್ಪಂದವಾಗಿದೆ. ಹೈಕಮಾಂಡ್ ಒಂದು ಒಪ್ಪಂದಕ್ಕೆ ತಂದಿದೆ. ಆ ಪ್ರಕಾರ ನಾವಿಬ್ಬರೂ ನಡೆದುಕೊಂಡು ಹೋಗುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಗೋಕರ್ಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ನಮ್ಮ ಮಧ್ಯೆ ಎರಡೂವರೆ ವರ್ಷದ ಒಪ್ಪಂದ ಆಗಿಲ್ಲ ಎಂಬ ಸಿಎಂ ಹೇಳಿಕೆ ಬಗ್ಗೆ ಕೇಳಿದಾಗ, "ಅವರು ಐದು ವರ್ಷ ಇರಲ್ಲ ಎಂದು ನಾನು ಯಾವತ್ತೂ ಹೇಳಿಲ್ಲ. ಹೈಕಮಾಂಡ್ ಅವರ ಪರ ಇಲ್ಲ ಎಂದು ಹೇಳಿಲ್ಲ. ಹೈಕಮಾಂಡ್ ಅವರ ಪರ ಇರುವುದಕ್ಕೆ ಅವರು ರಾಜ್ಯದ ಸಿಎಂ ಆಗಿದ್ದಾರೆ" ಎಂದರು.

ಸಿಎಂ ಬದಲಾವಣೆ ಆಗುವುದಿಲ್ಲವೇ ಎಂದು ಕೇಳಿದಾಗ, "ನೀವು ಆ ಬಗ್ಗೆ ಚರ್ಚೆ ಮಾಡುತ್ತಿದ್ದೀರಿ. ನಮ್ಮಲ್ಲಿ ಅದು ಇಲ್ಲ. ಪಕ್ಷ ಹೇಳಿದಂತೆ ನಾವು ಕೇಳುತ್ತೇವೆ" ಎಂದರು

ಕಳೆದ ಬಾರಿ ಬಂದಾಗ ನಿಮ್ಮ ಇಷ್ಟಾರ್ಥ ಸಿದ್ಧಿಯಾಗಿತ್ತು ಎಂದು ಹೇಳಿದ್ದೀರಿ, ಈ ಬಾರಿಯೂ ಆಗುವುದೇ ಎಂದು ಕೇಳಿದಾಗ, "ಅದೆಲ್ಲವನ್ನು ನಾನು ಹೇಳುವುದಿಲ್ಲ. ಇದು ನನ್ನ ಹಾಗೂ ಆ ತಾಯಿ ಮಧ್ಯೆ ಇರುವ ವಿಚಾರ. ಭಕ್ತ ಹಾಗೂ ಭಗವಂತನ ನಡುವಣ ವಿಚಾರ.ವಿಘ್ನ ನಿವಾರಕ ವಿಘ್ನೇಶ್ವರನ ದರ್ಶನ ಪಡೆದಿದ್ದೇನೆ. ಮಹಾಬಲೇಶ್ವರನಿಗೆ ಪೂಜೆ ಮಾಡಿದ್ದೇನೆ, ಗಂಗಾಧರೇಶ್ವರನಿಗೆ ಪ್ರಾರ್ಥನೆ ಮಾಡಿದ್ದೇನೆ" ಎಂದರು.