ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(MGNREGA)ಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ರಾಜ್ಯ ಸರ್ಕಾರ ವಿಧಾನಸಭೆಯ ವಿಶೇಷ ಅಧಿವೇಶನ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಘೋಷಿಸಿದ್ದಾರೆ.
ಇಂದು ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಗ್ರಾಮೀಣ ಉದ್ಯೋಗ ಯೋಜನೆಯನ್ನು ರಕ್ಷಿಸಲು ಸರ್ಕಾರ ಜನವರಿ 26 ರಿಂದ ಫೆಬ್ರವರಿ 2 ರವರೆಗೆ ರಾಜ್ಯಾದ್ಯಂತ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸಲಿದೆ ಎಂದರು.
"MGNREGA ಉಳಿಸಲು, AICC ಒಂದು ಕಾರ್ಯಕ್ರಮವನ್ನು ಯೋಜಿಸಿದೆ. ಆದಾಗ್ಯೂ, ಕರ್ನಾಟಕಕ್ಕೆ ಸಂಬಂಧಿಸಿದಂತೆ, ನಾವು ವಿಭಿನ್ನ ಕಾರ್ಯಕ್ರಮವನ್ನು ಯೋಜಿಸಿದ್ದೇವೆ. MGNREGA ಕುರಿತು ನಾವು ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯುತ್ತಿದ್ದೇವೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ MGNREGA ಉಳಿಸಿ ಪಾದಯಾತ್ರೆ ಆಯೋಜಿಸುತ್ತಿದ್ದೇವೆ" ಎಂದು ಡಿಸಿಎಂ ತಿಳಿಸಿದರು
